Breaking News

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

Spread the love

ಉದಯವಾಣಿ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

ಗೋಕಾಕ: ಉದಯವಾಣಿ ಪತ್ರಿಕೆ ತನ್ನ ನಿಸ್ಪಕ್ಷಪಾತ ವರದಿಗಾರಿಕೆ ಮೂಲಕ ರಾಜ್ಯದ ಜನರ ನಾಡಿಮಿಡಿತವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಉದಯವಾಣಿ ಪತ್ರಿಕೆಯ ದಶಮಾನೋತ್ಸವ ನಿಮಿತ್ಯವಾಗಿ ಹೊರತರಲಾದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ತಮ್ಮ ವರದಿಗಳ ಮೂಲಕ ಅಭಿವೃದ್ಧಿಕಾರ್ಯಕ್ಕೆ ಬೆಳಕು ಚೆಲ್ಲಿ, ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತಂದು ಜನಪರ ಅಭಿವೃದ್ಧಿಪರ ಸುದ್ದಿಗಳನ್ನು ಪ್ರಕಟಿಸಿ ಜನರ ಜೀವನಾಡಿಯಾಗಿದೆ. ಉದಯವಾಣಿ ಪತ್ರಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಶ್ರೀರಾಮ ಸೇನೆ ಅಧ್ಯಕ್ಷ ರವಿ ಪೂಜೇರಿ, ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ಯೂನುಸ್ ನದಾಫ್, ಕುರುಬ ಸಮಾಜದ ಮುಖಂಡ ಡಿ ಎಮ್ ದಳವಾಯಿ, ಉದಯವಾಣಿ ಗೋಕಾಕ ವರದಿಗಾರ ಬಸವರಾಜ ಭರಮನ್ನವರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

14 − eight =