ವೈಕುಂಠ ಏಕಾದಶಿ ದಿನ ತಿರುಪತಿ ತಿಮ್ಮಪ್ಪನ ಹುಂಡಿಗೆ ದಾಖಲೆ ಕಾಣಿಕೆ ಸಂಗ್ರಹ

ಯುವ ಭಾರತ ಸುದ್ದಿ ತಿರುಪತಿ:
ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಇತಿಹಾಸದಲ್ಲಿ ಮೊದಲ ಬಾರಿಗೆ ಜನವರಿ 2ರ ವೈಕುಂಠ ಏಕಾದಶಿ ದಿನದಂದು ಹುಂಡಿ ಸಂಗ್ರಹವು 7.68 ಕೋಟಿ ರೂಪಾಯಿಗಳ ದಾಖಲೆಯ ಆದಾಯ ದಾಖಲಿಸಿದೆ.
ವರದಿಯ ಪ್ರಕಾರ, ತಿರುಮಲದ ಬೆಟ್ಟದ ದೇವಾಲಯದಲ್ಲಿ ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಆದಾಯ ಸಂಗ್ರಹವಾಗಿದೆ. ಭಾನುವಾರ 69,414 ಭಕ್ತರು ಪ್ರಾರ್ಥನೆ ಸಲ್ಲಿಸಿದರು. ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಇತರೆ ರಾಜ್ಯಗಳ ಚುನಾಯಿತ ಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸೆಲೆಬ್ರಿಟಿಗಳು ಮತ್ತು ಇತರ ವಿಐಪಿಗಳು ಸೋಮವಾರ ವೈಕುಂಠ ಏಕಾದಶಿಯಂದು ತಿರುಮಲದಲ್ಲಿರುವ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ ಶ್ರೀನಿವಾಸನನ್ನು ಕಣ್ತುಂಬಿಕೊಂಡಿದ್ದಾರೆ. ಹೊಸ ವರ್ಷದ ಹಿಂದಿನ ದಿನವೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಡಿಸೆಂಬರ್ 31ರಿಂದಲೇ ತಿರುಮಲದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಪ್ರಾರಂಭಿಸಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವ ಭಕ್ತರ ಸಂಖ್ಯೆ ಕೂಡಾ ಅಧಿಕವಾಗಿತ್ತು.
ಹೊಸ ವರ್ಷ ಬಂದ ಬೆನ್ನಲ್ಲೇ ವೈಕುಂಠ ಏಕಾದಶಿ ಮತ್ತು ವೈಕುಂಠ ದ್ವಾದಶಿ ಉತ್ಸವ ಏಕಕಾಲದಲ್ಲಿ ನಡೆದಿದೆ. ಹೀಗಾಗಿ ತಿರುಮಲ ದೇವಸ್ಥಾನದಲ್ಲಿ ಸೋಮವಾರದಂದು ಅತಿ ಹೆಚ್ಚು ಹುಂಡಿ ಸಂಗ್ರಹವಾಗಿದೆ.
ತಿರುಮಲ ಹುಂಡಿಗೆ ಹಿಂದಿನ ಅತಿ ಹೆಚ್ಚು ಸಂಗ್ರಹ ಅಕ್ಟೋಬರ್ 23, 2022 ರಂದು 6.31 ಕೋಟಿ ರೂ.ಗಳಾಗಿತ್ತು.
ತೆಲಂಗಾಣ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳ ಚುನಾಯಿತ ಅಧಿಕಾರಿಗಳು, ನ್ಯಾಯಾಧೀಶರು, ಅಧಿಕಾರಿಗಳು, ಸೆಲೆಬ್ರಿಟಿಗಳು ಮತ್ತು ಇತರ ವಿಐಪಿಗಳು ಸೋಮವಾರ ವೈಕುಂಠ ಏಕಾದಶಿಗೆ ವೆಂಕಟೇಶ್ವರನ ದರ್ಶನಕ್ಕಾಗಿ ತಿರುಮಲದಲ್ಲಿರುವ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿದ್ದರು.
YuvaBharataha Latest Kannada News