Breaking News

ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !!

Spread the love

ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !!

ಗೋಕಾಕ: ಮಹಾರಾಷ್ಟ್ರದ ಅಘಾಡಿ ಸರ್ಕಾರದಲ್ಲಿ ಕ್ಷೀಪ್ರ ರಾಜಕೀಯ ಕ್ರಾಂತಿ ಹಿನ್ನೆಲೆ ಇಂದು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈಗೆ ಹೋಗಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಳಿಸಿ, ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ಗುರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬುಲಾವ್ ಮೇರೆಗೆ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿದ್ದಾರೆ.
ನಾಲ್ಕು ದಿನಗಳ ಕಾಲ ಮುಂಬೈನಲ್ಲೇ ಉಳಿದಿದ್ದ ರಮೇಶ್ ಜಾರಕಿಹೊಳಿ ವೈಯಕ್ತಿಕ ಕೆಲಸದ ಮೇಲೆ ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ರಮೇಶ್ ಮುಂಬೈಗೆ ಹೋಗಿದ್ದಾರೆ.
ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮುಂಬೈಗೆ ಹೋಗಿದ್ದನ್ನು ಅವರ ಆಪ್ತ ಮೂಲಗಳು ಖಚಿತ ಪಡಿಸಿದ್ದಾರೆ. ಸದ್ಯ ಮಹಾರಾಷ್ಟ್ರ ಸರಕಾರದ ಬಂಡಾಯದ ಲಾಭ ಪಡೆದು ಬಿಜೆಪಿ ಸರ್ಕಾರ ರಚನೆಗೆ ಬಿಜೆಪಿ ತೆರೆಮರೆ ಯತ್ನ ನಡೆದಿದೆ. ಈ ದೀಸೆಯಲ್ಲಿ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ನೆರವಿಗೆ ರಮೇಶ್ ಜಾರಕಿಹೊಳಿ ನಿಂತಿದ್ದಾರೆ. ಅವಶ್ಯಕತೆ ಬಿದ್ದರೆ ಹೊಸ ಸರ್ಕಾರ ರಚನೆಗೆ ಸಹಾಯ ಮಾಡುವ ಆಲೋಚನೆಯಲ್ಲಿರುವ ರಮೇಶ್ ಜಾರಕಿಹೋಳಿ ಇದ್ದಾರೆ ಎನ್ನಲಾಗಿದೆ.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

fifteen − six =