Breaking News

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?

Spread the love

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?

ಯುವ ಭಾರತ ಸುದ್ದಿ ಬೆಳಗಾವಿ :
ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧ ಬಳಿ ರಾಘವೇಂದ್ರ ಲೇಔಟ್ ನಲ್ಲಿ ಪಂಚಮಸಾಲಿ ಸಮಾಜದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು ಡಿಸೆಂಬರ್ 28 ರಂದು ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸಲಾಗುತ್ತದೆ. ಡಿಸೆಂಬರ್ 29ರಂದು ಅಧಿಕೃತವಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

twenty − 5 =