Breaking News

ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ

Spread the love

ಎಎಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಿವು ಕೊಳ್ಳಾರಿ ಆಯ್ಕೆ

ಯುವ ಭಾರತ ಸುದ್ದಿ ದೇವರ ಹಿಪ್ಪರಗಿ:
ತಾಲೂಕಿನ ಕೊಂಡಗೂಳಿ ಗ್ರಾಮದ ಯುವ ಮುಖಂಡ ಸಂಘಟನಾ ಚತುರ ಆಮ್ ಆದ್ಮಿ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಶಿವು ಕೊಳ್ಳಾರಿ ಅವರನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್ ಅವರ ಪಕ್ಕ ಅಭಿಮಾನಿಯಾಗಿದ್ದು ಅವರ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ತಾಲೂಕಿನಲ್ಲಿ ಪಕ್ಷ ಸಂಘಟನೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಜಿಲ್ಲೆ ಹಾಗೂ ರಾಜ್ಯದ ನಾಯಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಸಂಘಟನಾ ಗುಣವನ್ನು ಮೆಚ್ಚಿ ಪಕ್ಷ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಈ ಕುರಿತು ಪತ್ರಿಕೆ ಜೊತೆ ಮಾತನಾಡಿದ ಶಿವು ಕೊಳ್ಳಾರಿ ಪಕ್ಷ ನನ್ನನ್ನು ಗುರುತಿಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಎಲ್ಲಾ ಮುಖಂಡರನ್ನು ಪ್ರತ್ಯಕ್ಷ, ಪರೋಕ್ಷವಾಗಿ ಬೆಂಬಲಿಸಿದ ಹಾಗೂ ಅಭಿನಂದಿಸಿದ ಎಲ್ಲರನ್ನು ಧನ್ಯವಾದಗಳು ತಿಳಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

two + six =