Breaking News

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್

Spread the love

ಮೆಣಸಿಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್

ಯುವ ಭಾರತ ಸುದ್ದಿ ಬೆಳಗಾವಿ :
ನಗರದ ಮೆಣಸಿಗಲ್ಲಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸಿದೆ.
ಇದರಿಂದ ಉತ್ತಮ್ ನಾವೆಲ್ಟಿ ಅಂಗಡಿಗೆ ಬೆಂಕಿ ತಗುಲಿ ಸ್ಟೇಷನರಿ ಮತ್ತು ಅಲಂಕಾರಿಕ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಬೆಂಕಿಯಿಂದ ಹಾನಿಗೊಳಗಾದ ಉತ್ತಮ್ ನಾವೆಲ್ಟಿ ಅಂಗಡಿ ಮಹಿಪಾಲ್ ಸಿಂಗ್ ಅವರ ಒಡೆತನದಲ್ಲಿದೆ. ನಗರದ ಮೆಣಸಿ ಗಲ್ಲಿಯಲ್ಲಿ ಮುಖ್ಯರಸ್ತೆಯ ಪಕ್ಕದಲ್ಲಿಯೇ ಹೋಗುವ ರಸ್ತೆಯಲ್ಲಿ ಸಾಲು ಸಾಲು ಅಂಗಡಿಗಳಿವೆ.

ಈ ಪೈಕಿ ಉತ್ತಮ್ ನಾವೆಲ್ಟಿ ಅಂಗಡಿಗೆ ಇಂದು ಬೆಳಗ್ಗೆ 8 ರಿಂದ 9 ಗಂಟೆ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ರಸ್ತೆಯಲ್ಲಿ ಸಾಗುತ್ತಿದ್ದ ಜನರು ಹಾಗೂ ಅಕ್ಕಪಕ್ಕದ ನಾಗರಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದರು. ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸುವ ಭೀತಿ ಎದುರಾಗಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೊಡ್ಡ ಪ್ರಮಾಣದಲ್ಲಿ ನೀರು ಎರಚುವ ಮೂಲಕ ಅಂಗಡಿಯಲ್ಲಿದ್ದ ಬೆಂಕಿಯನ್ನು ಹತೋಟಿಗೆ ತಂದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four + one =