Breaking News

ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ

Spread the love

ಉಚಿತ ವಿದ್ಯುತ್ ಗೊಂದಲ ಬೇಡ ಎಂದ ಸಿದ್ದರಾಮಯ್ಯ

ಬೆಂಗಳೂರು:
ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಂಗಳವಾರ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಬಾಡಿಗೆ ಮನೆಯಲ್ಲಿ ವಾಸಿಸುವವರು ಬಹುತೇಕ ಬಡವರಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲಾಗುವುದು. ವಾಣಿಜ್ಯ ಉದ್ದೇಶದ ಬಾಡಿಗೆ ಹೊರತುಪಡಿಸಿ ಎಲ್ಲ ಬಾಡಿಗೆ ಗೃಹಗಳಿಗೂ ಉಚಿತ ವಿದ್ಯುತ್ ದೊರೆಯಲಿದೆ ಎಂದರು.

ಬಿಜೆಪಿ ನಾಯಕರು ಹಿಂದೆ ನೀಡಿದ್ದ ಭರವಸೆಗಳನ್ನು ನಾಲ್ಕು ವರ್ಷಗಳಲ್ಲಿ ಈಡೇರಿಸಲಿಲ್ಲ. ನೀರಾವರಿಗೆ ₹1.50 ಲಕ್ಷ ವಿನಿಯೋಗಿಸಲಿಲ್ಲ. ರೈತರ ಸಾಲ ಮನ್ನಾಮಾಡಲಿಲ್ಲ. ಇದರಿಂದ ಜನರು ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟ ಭರವಸೆ ಈಡೇರಿಸಿದೆ. ಅದನ್ನು ಸಹಿಸದೇ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದರು.

ಹಿಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿತ್ತು. ಈಗಲೂ ಭರವಸೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಪಠ್ಯ ಪರಿಷ್ಕರಣೆ, ಎನ್ ಇಪಿ ಕುರಿತು ತಜ್ಞರ ಜತೆ ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಯವುದು ಎಂದು ಹೇಳಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × 4 =