ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಯುವ ಭಾರತ ಸುದ್ದಿ ಬೆಂಗಳೂರು:
ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ.
ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲ್ಪಮೆಂಟ್ ಕಾರ್ಪೊರೇಷನ್ ಎಂ.ಡಿ ಆಗಿ ನಿಯೋಜಿಸಲಾಗಿದೆ.
ಸಂಜೀವಿನಿ-ಕೆಎಸ್ ಆರ್ಎಲ್ ಪಿಎಸ್ ಹೆಚ್ಚುವರಿ ಮಿಷನ್ ಡೈರೆಕ್ಟರ್ ಆಗಿದ್ದ ಸ್ವರೂಪ ಟಿ.ಕೆ ಅವರನ್ನು ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ನೇಮಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಸುರೇಶ್ ಬಿ ಹಿಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತ ಸಿಇಒ ಆಗಿ ನೇಮಕ ಮಾಡಲಾಗಿದೆ.
YuvaBharataha Latest Kannada News