Breaking News

ಶಿವಮೊಗ್ಗಕ್ಕೆ ಬಂತು ಈ ವಿವಿ

Spread the love

ಶಿವಮೊಗ್ಗಕ್ಕೆ ಬಂತು ಈ ವಿವಿ

ಯುವ ಭಾರತ ಸುದ್ದಿ ಶಿವಮೊಗ್ಗ :
ರಾಷ್ಟ್ರೀಯ ಹಾಗೂ ಆಂತರಿಕ ಭದ್ರತೆಗೆ ಸಂಬಂಧಿಸಿದ ಶಿಕ್ಷಣ ನೀಡುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದೆ. ಈ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಜರಾತಿನ ಅಹಮದಾಬಾದ್‌ನಲ್ಲಿ ಏಕೈಕ ರಕ್ಷಾ ವಿವಿ ಇದೆ. ಶಿವಮೊಗ್ಗದಲ್ಲಿ ಆರಂಭವಾಗುತ್ತಿರುವುದು ದೇಶದ 2ನೇ ವಿವಿ. ಈ ಸಂಸ್ಥೆಗಾಗಿ ಶಿವಮೊಗ್ಗದ ನವುಲೆಯಲ್ಲಿ 8 ಎಕರೆ ಜಮೀನು ಮಂಜೂರಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭವಾಗಲಿವೆ. ರಾಗಿಗುಡ್ಡದ ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಈ ವರ್ಷ ತರಗತಿ ಪ್ರಾರಂಭವಾಗಲಿವೆ ಎಂದಿದ್ದಾರೆ.

ನಮ್ಮ ಅಪೇಕ್ಷೆಯಂತೆ ಕೇಂದ್ರ ಸರಕಾರ ಕರ್ನಾಟಕಕ್ಕೆ ವಿವಿಯನ್ನು ಮಂಜೂರು ಮಾಡಿದೆ. ಈ ವಿವಿಯನ್ನು ಶಿವಮೊಗ್ಗಕ್ಕೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕಾಗಿ ಶಿವಮೊಗ್ಗ ನಗರದ ನವುಲೆಯಲ್ಲಿ 8 ಎಕರೆ ಭೂಮಿ ಮಂಜೂರಾಗಿದ್ದು, ಶೀಘ್ರದಲ್ಲೆ ಕಟ್ಟಡ ಕಾಮಗಾರಿಗಳು ಪ್ರಾರಂಭವಾಗಲಿವೆ. ಸದ್ಯ ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಪ್ರಾರಂಭವಾಗಲಿವೆ ಎಂದು ಮಾಹಿತಿ ನೀಡಿದರು. ಈ ವಿವಿಯಲ್ಲಿ ಭದ್ರತಾ ವಿಷಯಕ್ಕೆ ಸಂಬಂಧಿಸಿದ ಕೋರ್ಸುಗಳು, ಡಿಪ್ಲೊಮಾ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು ಎಂದರು..


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 3 =