Breaking News

ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

Spread the love

ಪತ್ರಕರ್ತರಿಗೆ ಬೆದರಿಕೆ : ಡಿಕೆಶಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಯುವ ಭಾರತ ಸುದ್ದಿ ಬೆಂಗಳೂರು :
ಪತ್ರಕರ್ತರಿಗೆ ಬೆದರಿಕೆ ಹಾಕಿ , ಗೂಂಡಾ ವರ್ತನೆ ತೋರಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಬುಧವಾರ ದೂರು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು . ಅದೇ ದಿನ ದೇಶದ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಯಲ್ಲಿದ್ದರು.
ಕೆಲ ಪತ್ರಕರ್ತರು ಶಿವಕುಮಾರ್ ಕರೆದಿದ್ದ ಸುದ್ದಿಗೋಷ್ಠಿಗೆ ಬಂದಿರಲಿಲ್ಲ.
ಸುದ್ದಿಗೋಷ್ಠಿಗೆ ಬಾರದವರ ಹೆಸರು ಬರೆದುಕೊಳ್ಳಿ . ಅವರ ಮ್ಯಾನೇಜ್ಮೆಂಟ್ ಜತೆ ಮಾತಾಡುತ್ತೇನೆ ಎಂದಿರುವ ಶಿವಕುಮಾರ್‌ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತ್ರಕರ್ತರು ಚುನಾವಣಾ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುವುದನ್ನು ಮರೆತು ನಾನು ಪತ್ರಕರ್ತರನ್ನು ಕೊಂಡುಕೊಳ್ಳಬಲ್ಲೆ ಎಂದಿದ್ದಾರೆ . ಅವರ ಮ್ಯಾನೇಜ್ಮೆಂಟ್ ಗೆ ಹೇಳಿ ಕೆಲಸದಿಂದ ತೆಗೆಸುತ್ತೇನೆ ಎಂದು ಹೇಳಿದ್ದಾರೆ . ಈ ಮೂಲಕವಾಗಿ ಡಿ.ಕೆ. ಶಿವಕುಮಾರ್ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ . ಪತ್ರಕರ್ತರ ಪರ ನಾವು ಇದ್ದೇವೆ ಎಂದು ಶೋಭಾ ಹೇಳಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

4 − one =