Breaking News

ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ -ಶಾಸಕ ರಮೇಶ ಜಾರಕಿಹೊಳಿ

Spread the love

ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ -ಶಾಸಕ ರಮೇಶ ಜಾರಕಿಹೊಳಿ


ಗೋಕಾಕ: ಪ್ರತಿಯೊಬ್ಬರೂ ಒಂದೊAದು ಗಿಡ ನೆಡುವ ಮೂಲಕ ಎಲ್ಲರೂ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡೋಣ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ಯೋಗಿಕೊಳ್ಳ ರಸ್ತೆಯಲ್ಲಿ ಬಿಜೆಪಿ ನಗರ ಘಟಕ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ೨೦೦ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಜರುಗುತ್ತವೆ. ಪ್ರಕೃತಿಯ ರಕ್ಷಣೆ ಮಾಡಬೇಕೆಂದರು.
ಒಂದು ಗಿಡವನ್ನು ನೆಟ್ಟು ಬೆಳೆಸಿದರೆ ಒಂದು ಜೀವ ಉಳಿಸಿದಂತೆ. ಒಂದು ಮರ ಕಡಿದರೆ ಹಲವು ಜೀವನಾಶ ಮಾಡಿದಂತೆ ಹೀಗಾಗಿ ಪರಿಸರದ ಬಗೆಗಿನ ಕಾಳಜಿ ಕೇವಲ ಪರಿಸರ ದಿನಾಚರಣೆಯ ದಿನದಂದು ಮಾತ್ರ ಇರದೇ ಪ್ರತಿ ದಿನವು ಪರಿಸರ ದಿನಾಚರಣೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ರೈತ ಮೋರ್ಚಾ ನಗರಾಧ್ಯಕ್ಷ ಸುರೇಶ ಪತ್ತಾರ, ಲಕ್ಷö್ಮಣ ತಳ್ಳಿ, ಮಹಾಂತೇಶ ಜನ್ಮಟ್ಟಿ, ರಾಜೇಶ್ವರಿ ಒಡೆಯರ, ಕಿರಣ ಡಮಾಮಗರ, ಸೀನು ಗೌಡ, ಸಚೀನ ಕಮಟೇಕರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

fourteen − five =