Breaking News

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ

Spread the love

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ

ಯುವ ಭಾರತ ಸುದ್ದಿ ಇಟಗಿ :
ಪಾರವಾಡ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಕಾರಿ ವಿರೇಶ ಸಜ್ಜನ ಮಾತನಾಡಿ, ಯಾವುದೇ ಆಮಿಷಗಳಿಗೆ ಒಳಗಾಗದೇ, ಎಲ್ಲರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಿ. ಉತ್ತಮ ಜನಪ್ರತಿಗಳನ್ನು ಆರಿಸಿ ತರುವುದು ನಿಮ್ಮ ಕೈಯಲ್ಲಿದೆ ಎಂದರು.
ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಮಿಥುನ್ ಸಾಂಬಳೆ, ಹರೀಶ ಗಾವಡೆ ಹಾಗೂ ಇತರರು ಉಪಸ್ಥಿತರಿದ್ದರು.

ಚೋರ್ಲಾ :
ಪಾರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೋರ್ಲಾದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿ ನಡೆಸಲಾಯಿತು.
ಪಿಡಿಓ ವಿರೇಶ ಸಜ್ಜನ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತದಾನ ಜಾಗೃತಿಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮತದಾನ ಏಕೆ ಮಾಡಬೇಕು ಎನ್ನುವುದನ್ನು ವಿವರಿಸಿ, ಮುಂದಿನ ವರ್ಷಗಳ ಉತ್ತಮ ಆಡಳಿತದ ಸಲುವಾಗಿ, ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಬುಧವಾರ ಎಲ್ಲರೂ ಮತದಾನದಲ್ಲಿ ಭಾಗವಹಿಸಿ ಎಂದರು. ಸಿಬ್ಬಂದಿಗಳಾದ ಮಿಥುನ ಸಾಂಬಳೆ, ಹರೀಶ ಗಾವಡೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

thirteen + one =