Breaking News

ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ವಿರುದ್ಧ ಗ್ರಾಮಸ್ಥರು ಬೀದಿಗಿಳಿದದ್ದು ಯಾಕೆ ?

Spread the love

ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ವಿರುದ್ಧ ಗ್ರಾಮಸ್ಥರು ಬೀದಿಗಿಳಿದದ್ದು ಯಾಕೆ ?

ಗೋಕಾಕ :
ಗೋಕಾಕ ಮತಕ್ಷೇತ್ರದ ರಾಜನಗಟ್ಟಿ, ಕಡಬಗಟ್ಟಿ ಮತ್ತು ಗಡ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಅವರ ವಿರುದ್ಧ ಈ ಗ್ರಾಮಗಳ ನಾಗರಿಕರು ಇದೀಗ ಸಿಡಿದೆದ್ದಿದ್ದಾರೆ. ಚುನಾವಣಾ ಪ್ರಚಾರದ ಭರಾಟೆಯಲ್ಲಿ ಮಹಾಂತೇಶ ಕಡಾಡಿ ಅವರು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು ಅಪಪ್ರಚಾರ ನಡೆಸಿದ್ದಾರೆ, ಈ ಮೂಲಕ ಊರಿನ ಹೆಸರು ಕೆಡಿಸುತ್ತಿದ್ದಾರೆ. ಈ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎನ್ನುವುದೇ ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿಯವರು ಮತ ಗಿಟ್ಟಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಪಪ್ರಚಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಕೆಂಡ ಕಾರಿದ್ದಾರೆ.
ಮಹಾಂತೇಶ ಕಡಾಡಿ ಎಂಬ ವ್ಯಕ್ತಿ ಯಾರು ಎನ್ನುವುದು ನಮ್ಮ ಗ್ರಾಮಕ್ಕೆ ಇದುವರೆಗೂ ಗೊತ್ತಿಲ್ಲ. ಹಾಗಿರುವಾಗ ಈ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಅವರು ಅಪಪ್ರಚಾರ ನಡೆಸುತ್ತಿದ್ದಾರೆ. ಅವರು ಸ್ವತಃ ಗ್ರಾಮಕ್ಕೆ ಬಂದು ಯಾರ ಬಳಿ ಬೇಕಾದರೂ ವಿಚಾರಿಸಲಿ. ಅದು ಬಿಟ್ಟು ಸುಳ್ಳು ಹೇಳುವುದನ್ನು ನಾವು ಸಹಿಸುವುದಿಲ್ಲ. ಒಂದು ವೇಳೆ ಅವರು ಈ ಬಗ್ಗೆ ಕ್ಷಮೆ ಯಾಚಿಸದೆ ಇದ್ದಲ್ಲಿ ಅವರನ್ನು ಗ್ರಾಮದೊಳಗೆ ಪ್ರವೇಶಿಸಲು ಬಿಡುವುದಿಲ್ಲ. ಅವರಿಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಾಂತೇಶ ಕಡಾಡಿ ಅವರು ನೀಡಿರುವ ಹೇಳಿಕೆ ಖಂಡನೀಯ. ಅವರು ತಕ್ಷಣ ಈ ಬಗ್ಗೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಅವರ ಕಚೇರಿ ಹಾಗೂ ಮನೆಯ ಎದುರು ಉಗ್ರ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಕೆ ರವಾನಿಸಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

three × two =