Breaking News

ಬಿಜೆಪಿಯತ್ತ ಚಿತ್ತ : ಯಡಿಯೂರಪ್ಪ ಭೇಟಿಯಾದ ಕಾಗೋಡು ಪುತ್ರಿ ರಾಜ ನಂದಿನಿ

Spread the love

ಬಿಜೆಪಿಯತ್ತ ಚಿತ್ತ : ಯಡಿಯೂರಪ್ಪ ಭೇಟಿಯಾದ ಕಾಗೋಡು ಪುತ್ರಿ ರಾಜ ನಂದಿನಿ

ಯುವ ಭಾರತ ಸುದ್ದಿ ಬೆಂಗಳೂರು :
ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ.

ಇಂದು(ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ರಾಜನಂದನಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇತ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ರಾಜನಂದಿನಿಗೆ ಕಾಂಗ್ರೆಸ್ ಟಿಕೆಟ್ ವಂಚಿಸಿತ್ತು. ಇಷ್ಟೇ ಅಲ್ಲ ಕಾಗೋಡು ತಿಮ್ಮಪ್ಪಗೂ ಟಿಕೆಟ್ ನಿರಾಕರಿಸಲಾಗಿತ್ತು.

ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು. ಇದರಿಂದ ಕಾಗೋಡು ಹಾಗೂ ರಾಜನಂದಿನಿ ತೀವ್ರ ಅಸಮಾಧಾನಗೊಂಡಿದ್ದರು. ಇದೀಗ ಕಾಂಗ್ರೆಸ್ ತಮ್ಮನ್ನು ಕಡೆಗಣಿಸುತ್ತಿದೆ ಅನ್ನೋ ಅಸಮಾಧಾನವನ್ನು ರಾಜನಂದಿನಿ ಹೊರಹಾಕಿದ್ದಾರೆ. ಇದರ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಂದು 2 ಗಂಟೆಗೆ ರಾಜನಂದಿನಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಬಳಿಕ ಅಧಿಕೃತವಾಗಿ ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

three + eighteen =